ಸಮೃದ್ಧಿ ಯೋಜನೆ-ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ.

ಸದರಿ ಯೋಜನೆಯಡಿ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.

ಸದರಿ ಯೋಜನೆಯಡಿ ವಿವಿಧ ಉದ್ದೇಶಗಳಡಿ ಯೋಜನೆಗಳನ್ನು ರೂಪಿಸಲಾಗಿದೆ.

ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದಲ್ಲಿ ಫ್ರಾಂಚೈಸಿ/ಡೀಲರ್ ಶಿಪ್ ವ್ಯವಸ್ಥೆಯೊಂದಿಗೆ ರಿಟೈಲ್ ವ್ಯಾಪಾರಿ ಮಳಿಗೆಗಳನ್ನು ಆರಂಭಿಸಲು ಅಗತ್ಯವಾದ ತಾಂತ್ರಿಕ ಬೆಂಬಲ ಹಾಗೂ ಆರ್ಥಿಕ ಬೆಂಬಲ ನೀಡಿ ಯಶ್ವಸಿ ಉದ್ದಿಮೆದಾರರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.

ಈಗಾಗಲೇ ಸರ್ಕಾರಿ ಮತ್ತು ಬ್ರಾಂಡೆಡ್ ಸಂಸ್ಥೆಗಳ ಜೊತೆ ಸರ್ಕಾರವು ಒಡಂಬಡಿಕೆ(ಎಂಓಯು) ಮಾಡಿಕೊಳ್ಳಲು ವ್ಯವಸ್ಥೆಯಾಗಿರುತ್ತದೆ.

ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

Post a Comment

Previous Post Next Post